“Book Descriptions: ವೀರಲೋಕದ 63ನೇ ಕೃತಿ ವಿಕ್ರಮ್ ಹತ್ವಾರ್ ಅವರ “ಕಾಗೆ ಮೇಷ್ಟ್ರು”… ಝೀರೋ ಮತ್ತು ಒಂದು’ ಹಾಗು ‘ಹಮಾರಾ ಬಜಾಜ್’ ಎಂಬ ಕಥಾ ಸಂಕಲನದಿಂದ ಓದುಗರನ್ನು ಸೆಳೆದಿರುವ ವಿಕ್ರಮ ಹತ್ವಾರ್, ಕನ್ನಡದ ಅನನ್ಯ ಕತೆಗಾರ ಮತ್ತು ಕವಿ. ಹೊಸ ಭಾಷೆ, ವಿಶಿಷ್ಟ ವಸ್ತು-ನಿರ್ವಹಣೆ, ಮಾಹಿತಿ ತಂತ್ರಜ್ಞಾನ ಯುಗದ ಪಲ್ಲಟಗಳು, ಜಾಗತೀಕರಣ ಸಂದರ್ಭದಲ್ಲಿನ ಮನುಷ್ಯ ಸಂಬಂಧಗಳು, ದ್ವಂದ್ವಗಳು, ಆಧುನಿಕ ಮನುಷ್ಯನ ಸಂಕಟ ತವಕ-ತಾಕಲಾಟ ಹುಡುಕಾಟ, ಬದಲಾಗುತ್ತಿರುವ ಕೌಟುಂಬಿಕ ವ್ಯವಸ್ಥೆ ಮತ್ತು ಮೌಲ್ಯ – ಇವು ವಿಕ್ರಮ ಹತ್ವಾರರ ಕತೆಗಳಲ್ಲಿ ವಿಮರ್ಶಕರು ಗುರುತಿಸಿರುವ ಕೆಲವು ವಿಶೇಷತೆಗಳು.” DRIVE